ಬಾಕಿ ಇರುವ ಅನುಕಂಪ ಆಧಾರದ ನೇಮಕಾತಿ ಪ್ರಸ್ತಾವನೆಗಳನ್ನು ಕೂಡಲೆ ಇತ್ಯರ್ಥಪಡಿಸುವಂತೆ ಮುಖ್ಯ ಮಂತ್ರಿಗಳಿಂದ ಸೂಚನೆ - ಸಿ.ಎಸ್. ಷಡಾಕ್ಷರಿ
ರಾಜ್ಯದ ಸರ್ಕಾರಿ ನೌಕರರ ಆದ್ಯ ಗಮನಕ್ಕೆ
- 2020-21ನೇ ಆರ್ಥಿಕ ಸಾಲಿನಲ್ಲಿ ನೇರ ನೇಮಕಾತಿಗಳನ್ನು ತಡೆಹಿಡಿದಿರುವ ಆದೇಶವನ್ನು ಅನುಕಂಪ ಆಧಾರದ ನೇಮಕಾತಿಗಳಿಗೂ ಅನ್ವಯಿಸಿ, ವಿವಿಧ ಇಲಾಖೆಗಳಲ್ಲಿ ಅನುಕಂಪ ನೇಮಕಾತಿಗಳನ್ನು ತಡೆಹಿಡಿಯಲಾಗಿತ್ತು.
- ಮೃತ ಸರ್ಕಾರಿ ನೌಕರರ ಕುಟುಂಬ ನಿರ್ವಹಣೆ ಹಿತದೃಷ್ಟಿಯಿಂದ ಅನುಕಂಪ ಆಧಾರದ ನೇಮಕಾತಿ ಪ್ರಸ್ತಾವನೆಗಳನ್ನು ಇತ್ಯರ್ಥಪಡಿಸುವಂತೆ ಮಾನ್ಯ ಮುಖ್ಯ ಮಂತ್ರಿಗಳಿಗೆ ಸಂಘವು ಮನವಿ ಸಲ್ಲಿಸಿತ್ತು.
- ಮಾನ್ಯ ಮುಖ್ಯ ಮಂತ್ರಿಗಳು ಬಾಕಿ ಇರುವ ಅನುಕಂಪ ನೇಮಕಾತಿ ಪ್ರಸ್ತಾವನೆಗಳನ್ನು ಕೂಡಲೆ ಇತ್ಯರ್ಥಪಡಿಸುವಂತೆ ಮಾನ್ಯ ಸಕಾರದ ಮುಖ್ಯ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಿದ್ದು, ಅದರನ್ವಯ ಆದೇಶ ಹೊರಡಿಸುವಂತೆ ಮಾನ್ಯ ಮುಖ್ಯ ಕಾರ್ಯದರ್ಶಿಗಳಿಗೆ ಸಂಘದ ವತಿಯಿಂದ ಮನವಿ ಮಾಡಲಾಗಿದೆ.
- ಈ ಬಗ್ಗೆ ಶೀಘ್ರ ಆದೇಶ ಹೊರಬೀಳಲಿದೆ.
Comments
Post a Comment