Posts

Showing posts from September, 2020

ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಿ-ಷಡಾಕ್ಷರಿ

Image
ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್.ಷಡಾಕ್ಷರಿಯವರು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ, ಜಿಲ್ಲೆಯ ಶಿಕ್ಷಕರಿಗೆ ದೊರಕಬಹುದಾದ ಸೌಲಭ್ಯಗಳನ್ನು ತ್ವರಿತಗತಿಯಲ್ಲಿ ಮಂಜೂರು ಮಾಡುವ ನಿಟ್ಟಿನಲ್ಲಿ ಚರ್ಚಿಸಿದರು.       ನೌಕರರ ಸಂಘದ ಪದಾಧಿಕಾರಿಗಳೊಂದಿಗೆ ಭೇಟಿ ನೀಡಿ ಶಿಕ್ಷಕರ ಸಮಸ್ಯೆಗಳ ಕುರಿತಂತೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ, ಪರೀಕ್ಷತಾವಧಿ ಘೋಷಣೆ, ಕಾಲಮಿತಿ ವೇತನ/ಸ್ವಯಂಚಾಲಿತ ವೇತನ ಬಡ್ತಿ, ಪದೋನ್ನತಿ ಹಾಗೂ ಇಲಾಖಾ ವಿಚಾರಣೆ ಪ್ರಕರಣಗಳನ್ನು ಶೀಘ್ರ ಇತ್ಯರ್ಥಪಡಿಸುವ ಮೂಲಕ ಶಿಕ್ಷಕರು ಅಲೆದಾಡುವುದನ್ನು ತಪ್ಪಿಸಿ ಅನುಕೂಲ ಕಲ್ಪಿಸಿಕೊಡುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಪದಾಧಿಕಾರಿಗಳಾದ ಶಾಂತರಾಜ್, ಮೋಹನ್‍ಕುಮಾರ್, ಕೃಷ್ಣಮೂರ್ತಿ, ಪ್ರಸನ್ನ, ಉದಯಸಿಂಗ್, ಡಿಡಿಪಿಐ ರಮೇಶ್, ಶಿವರುದ್ರಯ್ಯ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಪ್ರಸ್ತಾಪಿತ ವಿಷಯಗಳು ಬಾಕಿ ಇರುವ ಅರ್ಹತಾ ಪರೀಕ್ಷಾವಧಿ ಪ್ರಸ್ತಾವನೆಗಳನ್ನು ಶೀಘ್ರ ಇತ್ಯರ್ಥಪಡಿಸುವುದು. ಸಾಮಾನ್ಯ ಭವಿಷ್ಯ ನಿಧಿ ಮುಂಗಡ ಮಂಜೂರಾತಿ ಕೋರಿ ಬರುವ ಅರ್ಜಿಗಳನ್ನು ಕೂಡಲೆ ಇತ್ಯರ್ಥಪಡಿಸುವ ಮೂಲಕ ಶಿಕ್ಷಕರಿಗೆ ಅನುಕೂಲ ಕಲ್ಪಿಸುವುದು. ಕಾಲಮಿತಿ ವೇತನ ಬಡ್ತಿ, ಸ್ವಯಂಚಾಲಿತ ವೇತನ ಬಡ್ತಿ ಹಾಗೂ ಹೆಚ್ಚುವರಿ ವೇತನ ಬಡ್ತಿ ಪ್ರಸ್ತಾವನೆಗಳನ್ನು ಅನಗತ್ಯ ವಿಳಂಬಕ್ಕೆ ಆಸ್ಪದ ನೀಡದೆ ನಿಗದಿತ ಅವಧಿಯಲ್ಲಿ ವಿಲೇವಾರಿ ಮಾಡುವುದು. ಸುಮಾರು 6 ವರ್ಷಗ